*ಪ್ರಸಿದ್ಧ ಬನಶಂಕರಿ ದೇವಸ್ಥಾನದಲ್ಲಿ ಅನ್ನ ಪ್ರಸಾದ ವಿತರಣೆ ಬಂದ್*

ಪ್ರಗತಿವಾಹಿನಿ ಸುದ್ದಿ: ಇರಾನ್-ಇಸ್ರೇಲ್ ಯುದ್ಧದಿಂದಾಗಿ ದೇಶಾದ್ಯಂತ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಎದುರಾಗಿದ್ದು, ಹೋಟೆಲ್ ಮಾಲೀಕರು,ಆಟೋ ಚಾಲಕರು, ಜನಸಾಮಾನ್ಯರು ಸಂಕಷ್ಟಕ್ಕೀಡಾಗಿದ್ದಾರೆ. ಪ್ರಸಿದ್ಧ ದೇವಾಲಯಗಳಿಗೂ ಸಿಲಿಂಡರ್ ಸಮಸ್ಯೆ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಸಿದ್ಧ ಬನಶಂಕರಿ ದೇವಾಲಯದಲ್ಲಿ ಇಂದಿನಿಂದ ಅನ್ನಪ್ರಸಾದ ಸೇವೆ ಸ್ಥಗಿತಗೊಳಿಸಲಾಗಿದೆ. ಪ್ರತಿದಿನ ಬೇಕಾದಷ್ಟು ಸಿಲಿಂಡರ್‌ಗಳು ಸಿಗದ ಕಾರಣ, ಸಾವಿರಾರು ಭಕ್ತರು ಮತ್ತು ಬಡವರಿಗೆ ಉಚಿತ ಊಟದಿಂದ ವಂಚಿತರಾಗಿದ್ದಾರೆ. ಭಕ್ತರು ಸರ್ಕಾರವು ಈ ಸಮಸ್ಯೆ ಬಗೆಹರಿಸಲು ಪರ್ಯಾಯ ವ್ಯವಸ್ಥೆ ಮಾಡುವಂತೆ ಆಗ್ರಹಿಸಿದ್ದಾರೆ. ಹಲವಾರು ವರ್ಷಗಳಿಂದ ಬನಶಂಕರಿ ದೇವಸ್ಥಾನದಲ್ಲಿ ಅನ್ನಪ್ರಸಾದ ವಿತರಿಸಲಗುತ್ತಿತ್ತು. … Continue reading *ಪ್ರಸಿದ್ಧ ಬನಶಂಕರಿ ದೇವಸ್ಥಾನದಲ್ಲಿ ಅನ್ನ ಪ್ರಸಾದ ವಿತರಣೆ ಬಂದ್*