Kannada NewsKarnataka NewsLatest

*ಎಕ್ಸ್ ಪ್ರೆಸ್ ಹೈವೇಯಲ್ಲಿ ಮತ್ತೊಂದು ಭೀಕರ ಅಪಘಾತ; ಬಸ್ ಚಾಲಕ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ಅಪಘಾತದ ಸರಣಿ ಮುಂದುವರೆದಿದ್ದು, ಕೆ.ಎಸ್.ಆರ್.ಟಿ ಬಸ್ ಹಾಗೂ ಗೂಡ್ಸ್ ವಾಹನದ ನಡುವೆ ಸಂಭವಿಸಿದ ಅಪಘಾತಕ್ಕೆ ಬಸ್ ಚಾಲಕ ಸಾವನ್ನಪ್ಪಿದ್ದಾರೆ.

ರಾಮನಗರ ತಾಲುಕಿನ ಜಯಪುರ ಗೇಟ್ ಬಳಿ ಈ ಅಪಘಾತ ಸಂಭವಿಸಿದ್ದು, ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಗೂಡ್ಸ್ ವಾಹನ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಬಸ್ ಡಿವೈಡರ್ ಹಾರಿ ಹೋಗಿದೆ.

ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ ನಲ್ಲಿದ್ದ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button