Latest

ಕೊರೊನಾ ಭೀತಿ: ಪೊಲೀಸರಿಗೆ ಹೊಸ ಗೈಡ್ ಲೈನ್ಸ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೊಂಕು ದಿನೇ ದಿನೇ ಹೆಚ್ಚುತ್ತಿದ್ದು, ಖಾಕಿ ಪಡೆಗಳಿಗೂ ಸೋಂಕು ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್​​​​ ಕಮೀಷನರ್​​​ ಭಾಸ್ಕರ್​​ ರಾವ್​ 50 ವರ್ಷ ಮೇಲ್ಪಟ್ಟ ಪೊಲೀಸರು ಠಾಣೆಗೆ ಬರದಂತೆ ಆದೇಶಿಸಿದ್ದಾರೆ.

ಯಾರಿಗಾದರೂ ಆರೋಗ್ಯದ ಬಗ್ಗೆ ಅನುಮಾನವಿದ್ದಲ್ಲಿ ಕೂಡಲೇ ಕೋವಿಡ್​​-19 ಟೆಸ್ಟ್​ ಮಾಡಿಸುವಂತೆ ನಿರ್ದೇಶಿಸಿದ್ದಾರೆ. ಅಲ್ಲದೇ ನಗರ ಪೊಲೀಸ್ ಠಾಣೆಗಳಿಗೆ ಹಲವು ಸೂಚನೆ ರವಾನೆ ಮಾಡಿದ್ದಾರೆ.

* ಸಮಸ್ಯೆ ಏನೇ ಬಂದ್ರು ಧೈರ್ಯವಾಗಿ ಎದುರಿಸಬೇಕು. ಗಾಬರಿಯಾಗಬೇಡಿ, ಸರ್ಕಾರ ಸಮಾಜ ನಮ್ಮನ್ನ ನಂಬಿದೆ. ಎಲ್ಲಾ ಸ್ಟೇಷನ್​​ನಲ್ಲಿ 55 ವರ್ಷ ಮೇಲ್ಪಟ್ಟವರು ಮನೆಯಲ್ಲಿ ಇರಬೇಕು. ಬೆಂಗಳೂರು ಬಿಡುವಂತಿಲ್ಲ. ಅಧಿಕಾರಿಗಳು ಮಾನಿಟರ್ ಮಾಡಬೇಕು.

* ಸಾಧ್ಯವಾದಷ್ಟು ಯುವ ಹೋಂ ಗಾರ್ಡ್ ಬಳಕೆ ಮಾಡಿಕೊಳ್ಳಿ. ಜಂಟಿ‌ ಸಿಪಿ ಡಿಸಿಪಿಗಳು ಮಾರ್ಗದರ್ಶನ ಮಾಡ್ತಾರೆ.

* ಶಾಮಿಯಾನ ಹಾಕಿಕೊಂಡು ಠಾಣೆ ಹೊರಗಡೆ ಅಲ್ಲೆ ವಿಲೇವಾರಿ ಮಾಡಬೇಕು. ಆರೋಪಿಗಳು ಇರಲಿ, ಯಾರೇ ಅಗಲಿ, ಯಾರನ್ನೂ ಟಚ್ ಮಾಡುವಂತಿಲ್ಲ.

* ಹೊಯ್ಸಳ ಮತ್ತು ಚೀತಾ ಅನವಶ್ಯಕವಾಗಿ ಸುತ್ತಾಡಬಾರದು. ಸಮಸ್ಯೆ ಇದ್ರೆ ಕಾಲ್ ಬಂದ್ರೆ ಹೋಗಬೇಕು, ಸುಮ್ಮನೆ ಸ್ಟೇಷನ್​​ಗೆ ಬರಬಾರದು.

* ಮುಖ್ಯ ಕೇಸ್​ಗಳಲ್ಲಿ ಮಾತ್ರ ಆರೋಪಿಗಳನ್ನ ಬಂಧಿಸಬೇಕು.

* ಪ್ರತಿ ಠಾಣೆಯಲ್ಲಿ ಬಿಸಿ ನೀರಿನ ವ್ಯವಸ್ಥೆ ಇರಬೇಕು. ಕುಡಿಯಲು, ಸ್ನಾನ, ಕೈಕಾಲು ತೊಳೆಯಲು, ಮಾಸ್ಕ್ ಸ್ಯಾನಿಟೈಸರ್, ಫೇಸ್ ಶೀಲ್ಡ್ ಇರಬೇಕು.

* ನಾವು ಉಪಯೋಗಿಸುವ ವಾಹನಗಳು ಪ್ರತಿದಿನ ಸ್ಯಾನಿಟೈಸ್ ಆಗಬೇಕು. ಬೆಂಕಿ ಅನಾಹುತ ಆಗದಂತೆ ಸ್ಯಾನಿಟೈಸ್ ಮಾಡಬೇಕು. ನಾವು ಕ್ವಾರಂಟೈನ್ ಆಗಿದ್ದೀವಿ ಅಂತ ಸಾರ್ವಜನಿಕರಿಗೆ ನಮ್ಮ ಸೇವೆಯಿಂದ ಕೊರತೆ ಆಗಬಾರದು.

* ಸಾರ್ವಜನಿಕರಿಗೆ ಅಗತ್ಯ ಸೇವೆಗಳನ್ನು ಒದಗಿಸಬೇಕು, ಗ್ಲೌಸ್ ಹಾಕಬೇಕು, ದೂರದಲ್ಲಿ ನಿಂತು ಮಾತನಾಡಬೇಕು.

* ಎಂಒಬಿ ಕಾರ್ಡ್ ಬಂಧಿಸೋದು ಬೇಡ, ತಾಂತ್ರಿಕವಾಗಿ ಅವರ ಮೇಲೆ ನಿಗಾ ಇಟ್ಟಿರಿ. ಅವರ ಮೇಲೆ ಇನ್ನೂ ನಿಗಾ ಹೆಚ್ಚಾಗಿರಬೇಕು. ನಾವು ಸುಮ್ಮನೆ ಇದ್ದೀವಿ ಅಂತ ಸಮಾಜಘಾತುಕ ಶಕ್ತಿಗಳಿಗೆ ಅವಕಾಶ ಕೊಡಬಾರದು, ಇನ್ಸ್‌ಪೆಕ್ಟರ್, ಪಿಎಸ್ಐಗಳು ಗಮನ ಇಡಬೇಕು.

* ಮುಖ್ಯ ಕಾರ್ಯದರ್ಶಿಗಳು ಇಲಾಖೆಗೆ ಎಲ್ಲಾ ನೆರವು ನೀಡೊ ಬಗ್ಗೆ ಹೇಳಿದ್ದಾರೆ. ಹಾಗೂ ಪೊಲೀಸ್ ಕ್ವಾಟ್ರಸ್ ಗಳಲ್ಲಿ ಸ್ವಚ್ಚತೆ ಇರಬೇಕು, ಎಲ್ಲ ಮನೆಗಳಿಗೆ ಸ್ಯಾನಿಟೈಸರ್, ಮಾಸ್ಕ್ ಕೊಡಬೇಕು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button