Latest

ಬಾಲಕನ ಕಿಡ್ನ್ಯಾಪ್ ಪ್ರಕರಣ ಸುಖಾಂತ್ಯ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮನೆಯ ಮುಂದೆ ಆಟವಾಡುತ್ತಿದ್ದ ಉದ್ಯಮಿ ಪುತ್ರನನ್ನು ಕಿಡ್ನ್ಯಾಪ್ ಮಾಡಿರುವ ಪ್ರಕರಣ ಸುಖಾಂತ್ಯವಾಗಿದ್ದು, ಕಿಡ್ನ್ಯಾಪ್ ಆಗಿದ್ದ ಬಾಲಕನನ್ನು ಪೊಲೀಸರು ರಕ್ಷಿಸಿದ್ದಾರೆ.

ಬೆಂಗಳೂರಿನ ಭಾರತಿ ನಗರದಲ್ಲಿ ಈ ಘಟನೆ ನಡೆದಿದೆ. ಉದ್ಯಮಿಯ ಮಗ ಮನೆ ಮುಂದೆ ಆಟವಾಡುತ್ತಿದ್ದಾಗ ಕಿರಾತಕರು ಆತನನ್ನು ಕಿಡ್ನ್ಯಾಪ್​ ಮಾಡಿದ್ದರು. ಬಳಿಕ ಆತನ ಪೋಷಕರಿಗೆ ಕರೆ ಮಾಡಿ 2 ಕೋಟಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಮೊಹಮ್ಮದ್ ಸಾದಿಕ್ ಮತ್ತು ಉಸ್ಮಾ ದಂಪತಿಯ 11 ವರ್ಷದ ಪುತ್ರ ಕಿಡ್ನ್ಯಾಪ್ ಆಗಿದ್ದ ಹುಡುಗ. ಅಪಹರಣಕಾರರಿಂದ ಕರೆ ಬಂದ ಬಳಿಕ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು.

ದೂರು ದಾಖಲಿಸಿಕೊಂಡ ಪೊಲೀಸರು ಪ್ರಕರಣದ ಬೆನ್ನತ್ತಿದ್ದರು. ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ಅಪಹರಣಕಾರರ ಪತ್ತೆಗೆ 5 ವಿಶೇಷ ತಂಡಗಳನ್ನು ರಚಿಸಿದ್ದರು. ಪೂರ್ವ ವಿಭಾಗ ಡಿಸಿಪಿ ಡಾ.ಶರಣಪ್ಪ ನೇತೃತ್ವದಲ್ಲಿ ತುಮಕೂರು ಬಳಿ ಕಿಡ್ನ್ಯಾಪರ್ಸ್ ಪತ್ತೆಹಚ್ಚಿದ್ದು, ಬಾಲಕನನ್ನು ರಕ್ಷಿಸಿದ್ದಾರೆ.

ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಭಾರತೀನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Home add -Advt

Related Articles

Back to top button