Uncategorized

*ಮಳೆಯಲ್ಲಿಯೆ ಬೆಂಗಳೂರು ಸಿಟಿ ರೌಂಡ್ಸ್ ಹಾಕಿದ ಡಿಸಿಎಂ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜಿಟಿ ಜಿಟಿ ಮಳೆ ಮಧ್ಯೆಯೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಬೆಂಗಳೂರು ಸಿಟಿ ರೌಂಡ್ಸ್ ಹಾಕಿದ್ದಾರೆ.

ಈ ವೇಳೆ ಸರ್ವಜ್ಞನಗರ ಸೇರಿದಂತೆ ಹಲವೆಡೆ ಭೇಟಿ ನೀಡಿದ್ದು, ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಮಳೆ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿದರು.

Home add -Advt

ಸಿಟಿ ರೌಂಡ್ಸ್ ಬಳಿಕ ಮಾತನಾಡಿದ ಡಿಸಿಎಂ, ಸರ್ವಜ್ಞನಗರದಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ, ಐಟಿಸಿ ರಸ್ತೆ ಫ್ಲೈ ಓವರ್ ವಿಸ್ತೀರ್ಣ, ಎರಡು ಜಾಗದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲು ಸಾರ್ವಜನಿಕರು ಮನವಿ ಮಾಡಿದ್ದಾರೆ. ಈ ಹಿಂದಿನ ಸರ್ಕಾರ ಸಮಸ್ಯೆ ಬಗೆಹರಿಸಿಲ್ಲ, ಹಾಗಾಗಿ ಜನರು ಈ ಪ್ರಸ್ತಾವನೆಯನ್ನು ಇಟ್ಟಿದ್ದಾರೆ ಎಂದರು.


Related Articles

Back to top button