Latest

ಬೈಕ್ ಸವಾರನ ಮೇಲೆ ಕಾರು ಚಾಲಕನಿಂದ ಗುಂಡಿನ ದಾಳಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಸ್ತೆಯಲ್ಲಿ ಮುಂದೆ ಸಾಗಲು ದಾರಿ ಬಿಡಲಿಲ ಎಂಬ ಕ್ಷುಲ್ಲಕ ಕಾರಣಕ್ಕೆ ಬೈಕ್ ಸವಾರನ ಮೇಲೆ ಲ್ಯಾಂಡ್ ರೋವರ್ ಕಾರು ಚಾಲಕ ಗುಂಡಿನ ದಾಳಿ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಎಂ.ಎಸ್.ರಾಮಯ್ಯ ವೈದ್ಯಕೀಯ ಕಾಲೇಜಿನ ಬಳಿ ಈ ಘಟನೆ ನಡೆದಿದೆ. ಸದ್ಯ ಬೈಕ್ ಸವಾರ ಅನಿಲ್ ಕ್ಷಣಾರ್ಧದಲ್ಲಿ ಗುಂಡೇಟಿನಿಂದ ಬಚಾವಾಗಿದ್ದಾರೆ.

Related Articles

ಈ ಕುರಿತು ಯಶವಂತಪುರ ಪೊಲೀಸ್ ಠಾಣೆಯಲ್ಲಿ ಬೈಕ್ ಸವಾರ ದೂರು ನೀಡಿದ್ದು, ದೂರು ದಾಖಲಿಸಿಕೊಂಡಿರುವ ಪೊಲೀಸರು ಕಾರು ಚಾಲಕನ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ. ಸಿಸಿಟಿವಿಯಲ್ಲಿ ಶೂಟೌಟ್ ನಡೆಸಿರುವ ದೃಶ್ಯ ಸೆರೆಯಾಗಿದ್ದು, ಇದೀಗ ಪೊಲೀಸರು ಆರೋಪಿ ಲ್ಯಾಂಡ್ ರೋವರ್ ಕಾರು ಚಾಲಕನ್ನು ಬಂಧಿಸಿದ್ದಾರೆ.
ಪುಟ್ಟ ಬಾಲಕನ ಮೇಲೆ ಹರಿದ ಕಾರು; ಮಗು ಸಾವು; ಗರ್ಭಿಣಿ ಗಂಭೀರ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button