Latest

ಕಾಲೇಜು ಅಡ್ಮಿಷನ್ ಗೆ ಬಂದಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಹತ್ಯೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಲೇಜು ಅಡ್ಮಿಷನ್ ಗೆ ಬಂದಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಬ್ಯಾಡರಾಯನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಾಲೇಜು ಅಡ್ಮಿಷನ್ ಗಾಗಿ ಹೊರ ರಾಜ್ಯದಿಂದ ಬಂದಿದ್ದ ವಿದ್ಯಾರ್ಥಿನಿ ಮೇಲೆ ಆಕೆಯ ಪರಿಚಯದವವೇ ಆದ ವಿದ್ಯಾರ್ಥಿ ಈ ಕೃತ್ಯವೆಸಗಿದ್ದು, ಸಧ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿ ಕೂಡ ಹೊರ ರಾಜ್ಯದವನೇ ಆಗಿದ್ದು, ಸಂತ್ರಸ್ತ ವಿದ್ಯಾರ್ಥಿನಿಗೆ ಪರಿಚಿತ ಎನ್ನಲಾಗಿದೆ. ಅಡ್ಮಿಷನ್ ಗೆ ಬಂದ ವಿದ್ಯಾರ್ಥಿನಿಯನ್ನು ಆರೋಪಿ ಬ್ಯಾಡರಹಳ್ಳಿಯಲ್ಲಿರುವ ತನ್ನ ರೂಮಿಗೆ ಕರೆದಿದ್ದಾನೆ. ಪರಿಚಯದವನು ಎಂದು ನಂಬಿ ವಿದ್ಯಾರ್ಥಿನಿ ಆತನ ರೂಮಿಗೆ ಹೋಗಿದ್ದಾಳೆ. ಈ ವೇಳೆ ಆಕೆಯ ಮೇಲೆ ಅತ್ಯಾಚಾರವೆಸಗಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button