Kannada NewsKarnataka NewsLatest
*ತಾಲೂಕು ಪಂಚಾಯತ್ EO ವೆಂಕಟೇಶ್ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ; ಕೋಲಾರ: ಲೋಕಾಯುಕ್ತ ದಾಳಿ ಪ್ರಕರಣದಲ್ಲಿ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕು ಪಂಚಾಯತ್ ಇಒ ವೆಂಕಟೇಶ್ ಅವರನ್ನು ಅಮಾನತು ಮಾಡಲಾಗಿದೆ.
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏ.24ರಂದು ಇಒ ವೆಂಕಟೇಶ್ ಮನೆ ಮೇಲೆ ಲೋಕಾಯುಕ್ತ ಅದಿಕಾರಿಗಳು ದಾಳಿ ನಡೆಸಿದ್ದರು.
ವೆಂಕಟೇಶ್ ಅವರಿಗೆ ಸೇರಿದ 5 ಕಡೆ ದಾಳಿ ನಡೆಸಲಾಗಿತ್ತು. ಈ ವೇಳೆ ಆದಾಯ ಮೀರಿ ಆಸ್ತಿ ಹೊಂದಿರುವುದು ಮೇಲ್ನೋಟಕ್ಕೆ ಸಾಬೀತಾಗಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಲು ಆರೋಪಿ ಸದರಿ ಹುದ್ದೆಯಲ್ಲಿದ್ದರೆ ಸುಗಮ ತನಿಖೆಗೆ ಅಡ್ಡಿಯಾಗಬಹುದು ಎಂಬ ಕಾರಣಕ್ಕೆ ಆರೋಪಿ ಇಒ ವೆಂಕಟೇಶ್ ಅವರನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.




