
ಪ್ರಗತಿವಾಹಿನಿ ಸುದ್ದಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ವೇಳೆ ರಾಯಚೂರಿಗೆ ಪ್ರಾತಿನಿಧ್ಯ ಸಿಕ್ಕಿಲ್ಲ ಎಂದು ಬೇಸರಗೊಂಡು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಬಸನಗೌಡ ದದ್ದಲ್ ರಾಜೀನಾಮೆ ನೀಡಿದ್ದಾರೆ.
ರಾಯಚೂರು, ಯಾದಗಿರಿ ಜಿಲ್ಲೆಗಳಿಗೆ ಯಾವುದೇ ಪ್ರಾತಿನಿಧ್ಯ ಸಿಗದಿರುವುದು ಬೇಸರದ ಸಂಗತಿ. ನೀತಿ ಆಯೋಗ ಗುರುತಿಸಿರುವ ಮಹತ್ವಾಕಾಂಕ್ಷಿ ಜಿಲ್ಲೆಗಳ ಪಟ್ಟಿಯಲ್ಲಿ ರಾಯಚೂರು ಇದ್ದರೂ, ಸಚಿವ ಸಂಪುಟದಲ್ಲಿ ಜಿಲ್ಲೆಗೆ ಅವಕಾಶ ಸಿಗದಿರುವುದರಿಂದ ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.
ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಲ್ಲಿಸಿದ್ದಾರೆ. ಬಸನಗೌಡ ದದ್ದಲ್ ರಾಜೀನಾಮೆ ಭಾರಿ ಚರ್ಚೆಗೆ ಕಾರಣವಾಗಿದೆ.



