Politics

*ಬಿಜೆಪಿ ಶಾಸಕ ಯತ್ನಾಳ್ ಗೆ ಹೈಕಮಾಂಡ್ ನಿಂದ ಶೋಕಾಸ್ ನೋಟಿಸ್ ಜಾರಿ* *ಉತ್ತರ ನೀಡುವೆ ಎಂದ ಶಾಸಕ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಬಣ ರಾಜಕೀಯ, ಪರಸ್ಪರ ವಾಕ್ಸಮರ ತಾರಕ್ಕೇರಿರುವ ನಡುವೆಯೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್, ಯತ್ನಾಳ್ ಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ರಾಜ್ಯ ಮಟ್ಟದ ಪಕ್ಷದ ನಾಯಕತ್ವದ ವಿರುದ್ಧ ನಿಮ್ಮ ನಿರಂತರ ವಾಗ್ದಾಳಿ ಹಾಗೂ ಪಕ್ಷದ ನಿರ್ದೇಶನಗಳನ್ನು ಧಿಕ್ಕರಿಸುತ್ತಿರುವ ಬಗ್ಗೆ ವಿವಿಧ ವೇದಿಕೆಗಳಲ್ಲಿ ವರದಿಯಾಗಿದೆ. ಈ ಹಿಂದೆಯೂ ನಿಮಗೆ ಶೋಕಾಸ್ ನೋಟಿಸ್ ನೀಡಲಾಗಿತ್ತು. ನಿಮ್ಮ ಹಿರಿತನ ಹಾಗೂ ನೀವು ಸಲ್ಲಿಸಿದ ವಿವರಣೆಗಳನ್ನು ಪರಿಗಣಿಸಿ ಕೇಂದ್ರ ಶಿಸ್ತು ಸಮಿತಿ ಮೃಧುವಾದ ದೃಷ್ಟಿಕೋನ ತೆಗೆದುಕೊಂಡಿತ್ತು. ಆದಗ್ಯೂ ನೀವು ಮತ್ತೆ ಪಕ್ಷದ ನಿಯಮ ಉಲ್ಲಂಘನೆ ಮಾಡುತ್ತಿದ್ದೀರಿ.

Home add -Advt

ನಿಮ್ಮ ವಿರುದ್ಧ ಯಾಕೆ ಶಿಸ್ತು ಕ್ರಮ ಕೈಗೊಳ್ಳಬಾರದು ಎಂಬುದನ್ನು ತಿಳಿಸಿ. 10 ದಿನಗಳಲ್ಲಿ ಉತ್ತರ ನೀಡುವಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ.

ಈ ನೋಟೀಸ್ ಗೆ ಉತ್ತರ ನೀಡುವುದಾಗಿ ಯತ್ನಾಳ ಟ್ವೀಟ್ ಮಾಡಿದ್ದಾರೆ.


Related Articles

Back to top button