Karnataka NewsLatestPolitics

*BREAKING: ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ: ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ಹೊಸ ಪೀಠಾಧ್ಯಕ್ಷರ ನೇಮಕವಾಗಬೇಕು ಎಂಬ ಕೂಗು ಕೇಳಿಬರುತ್ತಿರುವ ನಡುವೆಯೇ ಪಂಚಮಸಾಲಿ ಪೀಠಾಧ್ಯಕ್ಷ ಬಸವ ಜಯಮೃತ್ಯುಂಜಯ ಸ್ವಾಮೀಜಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುವ ಮೂಲಕ ಗುರುತಿಸಿಕೊಂಡಿದ್ದ ಕೋಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅನಾರೋಗ್ಯಕ್ಕೀಡಾಗಿದ್ದಾರೆ. ತಲೆನೋವು, ವಾಂತಿ, ಎದೆನೋವಿನಿಂದ ಬಳಲುತ್ತಿದ್ದು, ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Home add -Advt

ಮತ್ತೊಂದೆಡೆ ಲಿಂಗಾಯಿತ ಪಂಚಮಸಾಲಿ ಟ್ರಸ್ಟ್ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ್ ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಬಸವ ಜಯಮೃತ್ಯುಂಜಯ ಸ್ವಾಮೀಜಿಯವರನ್ನು ಪೀಠದಿಂದ ಇಳಿಸಬೇಕು. ಅವರು ಸ್ವಾಮೀಜಿಯಂತೆ ನಡೆದುಕೊಳ್ಳುತ್ತಿಲ್ಲ. ನೂತನ ಪೀಠಾಧಿಪತಿಗಳ ನೇಮಕ ಮಾಡಬೇಕಿದೆ ಎಂದು ಹೇಳಿಕೆ ನೀಡಿದ್ದಾರೆ.


Related Articles

Back to top button