Belagavi NewsBelgaum NewsKannada NewsKarnataka NewsLatest
*ಬಸವ ಜಯಮೃತ್ಯುಂಜಯ ಸ್ವಾಮೀಜಿಗೆ ಬಿಗ್ ಶಾಕ್: ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆ*

ಪ್ರಗತಿವಾಹಿನಿ ಸುದ್ದಿ: ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನ ವಿಚಾರವಾಗಿ ನಡೆಯುತ್ತಿದ್ದ ಜಟಾಪಟಿಯಲ್ಲಿ ಪಂಚಮಸಾಲಿ ಪೀಠಾದ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಉಚ್ಛಾಟನೆ ಮಾಡಲಾಗಿದೆ.
ಕೂಡಲಸಂಗಮ ಪಂಚಮಸಾಲಿ ಪೀಠದಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್, ಕಾರ್ಯದರ್ಶಿ ನೀಲಕಂಠ ಅಸೂಟಿ ಸೇರಿದಂತೆ ಹಲವು ಸದಸ್ಯರು ಸ್ವಾಮೀಜಿ ಉಚ್ಛಾಟನೆಗೆ ನಿರ್ಧಾರ ಕೈಗೊಂಡಿದ್ದಾರೆ.
ದಾವಣಗೆರೆ, ಬೆಳಗಾವಿ ಸೇರಿದಂತೆ ಇತರೆಡೆಗಳಲ್ಲಿ ಆಸ್ತಿ ಮಾಡಿದ್ದಾರೆ. ಟ್ರಸ್ಟ್ ಸದಸ್ಯರ ಮಾತುಗಳಿಗೆ ಬೆಲೆಕೊಡುತ್ತಿಲ್ಲ ಹಲವಾರು ಕಾರಣಗಳಿಂದ ಅವರನ್ನು ಉಚ್ಛಾಟಿಸಲು ತೀರ್ಮಾನ ಕೈಗೊಂಡು ಉಚ್ಛಾಟನೆ ಮಾಡಲಾಗಿದೆ ಎಂದು ಸಭೆಯಲ್ಲಿ ಪಾಲ್ಗೊಂಡ ಮುಖಂಡರು ತಿಳಿಸಿದ್ದಾರೆ.