Kannada NewsKarnataka NewsLatestPolitics
*ಭಾರತ-ಪಾಕ್ ಕ್ರಿಕೆಟ್ ಪಂದ್ಯ ರದ್ದು ಮಾಡಬೇಕಿತ್ತು ಎಂದ ಸಂಸದ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ: ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿಂದು ಭಾರತ-ಪಾಕಿಸ್ತಾನ ನಡುವೆ ಹಣಾಹಣಿ ನಡೆಯಲಿದೆ. ಭಾರಿ ವಿರೋಧದ ನಡುವೆಯೂ ಭಾರತ-ಪಾಕ್ ನಡುವೆ ಪಂದ್ಯ ಆಯೋಜನೆಗೊಂಡಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕೂಡ ವಿರೋಧ ವ್ಯಕ್ತಪಡಿಸಿದ್ದಾರೆ.
ಭಾರತ-ಪಾಕಿಸ್ತಾನ ನಡುವೆ ಕ್ರಿಕೆಟ್ ಪಂದ್ಯ ರದ್ದು ಮಾಡಬೇಕಿತ್ತು ಎಂದು ಬಿಜೆಪಿ ಸಂಸದ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬೊಮ್ಮಾಯಿ, ಭಾರತ-ಪಾಕ್ ಪಂದ್ಯ ರದ್ದು ಮಾಡಬೇಕಿತ್ತು. ಪಹಲ್ಗಾಮ್ ನಲ್ಲಿ ನಡೆದ ಹತ್ಯಾಕಾಂಡ ಇನ್ನೂ ಮಾಸಿಲ್ಲ. ಕ್ರೀಡೆ ಮುಖ್ಯ ನಿಜ. ಆದರೆ ಜನರ ಭಾವನೆ ಅದಕ್ಕಿಂತಲೂ ಮುಖ್ಯವಾದದ್ದು. ದೇಶದ ಜನರ ಭಾವನೆಗೆ ಧಕ್ಕೆತರುವಂತೆ ಮಾಡಬಾರದು ಎಂಬುದು ನನ್ನ ಅಭಿಪ್ರಾಯ ಎಂದಿದ್ದಾರೆ.