Kannada NewsKarnataka NewsLatestPolitics

*ಬೆಂಗಳೂರಿನಲ್ಲಿ ವಿಪಕ್ಷ ನಾಯಕರ ಸಭೆ; ಯಾವ ಪ್ರಯೋಜನವೂ ಇಲ್ಲ ಎಂದು ಮಾಜಿ ಸಿಎಂ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಸೋಲಿಸಲು ಪ್ರತಿಪಕ್ಷಗಳು ಒಂದಾಗುತ್ತಿವೆ. ಆದರೆ ಮೋದಿ ಮಣಿಸಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ನಾಯಕರ ಸಭೆ ವಿಚಾರವಾಗಿ ಮಾತನಾಡುತ್ತಾ, ಮೋದಿ ಮಣಿಸುವ ಏಕೈಕ ಉದ್ದೇಶದಿಂದ ಪ್ರತಿಪಕ್ಷಗಳು ಒಂದಾಗ್ತಿವೆ. ಬೆಂಗಳೂರಿನಲ್ಲಿ 2 ದಿನ ಸಭೆ ನಡೆಸುತ್ತಿದ್ದಾರೆ. ಆದರೆ ದೇಶದಲ್ಲಿ ಪ್ರತಿಪಕ್ಷಗಳು ಶಕ್ತಿಯುತವಾಗಿಲ್ಲ. ಪ್ರತಿಪಕ್ಷಗಳ ಸಭೆಯಿಂದ ಯಾವುದೇ ಪ್ರಯೋಜನವಾಗಲ್ಲ ಎಂದರು.

ಪ್ರತಿಪಕ್ಷ ನಾಯಕರ ಸಭೆಯಿಂದ ಯಾವ ರಾಜಕೀಯ ಲಭವೂ ಆಗಲ್ಲ. ಮೋದಿಯವರನ್ನು ಸೋಲಿಸಲು ಸಾಧ್ಯವೂ ಇಲ್ಲ ಎಂದು ಹೇಳಿದರು.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button