Latest

ಶಾಲಾ ಬಾಲಕಿ ಮೇಲೆ ಹರಿದ ಕಸದ ಲಾರಿ; ಸ್ಥಳದಲ್ಲೇ ವಿದ್ಯಾರ್ಥಿನಿ ಸಾವು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಬಿಎಂಪಿ ಕಸದ ಲಾರಿಗೆ ಶಾಲಾ ಬಾಲಕಿಯೊಬ್ಬರು ಮೃತಪಟ್ಟ ಘಟನೆ ಬೆಂಗಳೂರಿನ ಹೆಬ್ಬಾಳದಲ್ಲಿ ನಡೆದಿದೆ.

ಹೆಬ್ಬಾಳ ಪೊಲೀಸ್ ಠಾಣೆಯ ಮುಂಭಾಗವೇ ಈ ದುರ್ಘಟನೆ ಸಂಭವಿಸಿದೆ. ಪೊಲೀಸ್ ಠಾಣೆಯ ಬಳಿಯ ಅಂಡರ್ ಪಾಸ್ ನಲ್ಲಿ ಮಳೆಯಿಂದಾಗಿ ನೀರು ತುಂಬಿತ್ತು. ಸಾರ್ವಜನಿಕರು ಕಷ್ಟಪಟ್ಟು ಕಲ್ಲುಗಳ ಮೇಲೆ ಹೆಜ್ಜೆ ಇಡುತ್ತಾ ನಿಧಾನವಾಗಿ ರಸ್ತೆ ದಾಟುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಬಿಬಿಎಂಪಿ ಕಸದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದು ಬಳಿಕ ಸಾರ್ವಜನಿಕರ ಮೇಲೆ ಹರಿದಿದೆ. ಸ್ಥಳದಲ್ಲೇ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ.

ಘಟನೆಯಲ್ಲಿ 8 ಜನರಿಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಬಾಲಕಿಯನ್ನು 14 ವರ್ಷ ಅಕ್ಷಯಾ ಎಂದು ಗುರುತಿಸಲಾಗಿದ್ದು, ಸದಾಶಿವನಗರ ಸ್ಟೆಲ್ಲಾ ಮೆರೀಸ್ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದಳು ಎಂದು ತಿಳಿದುಬಂದಿದೆ.
ಮದರಸಾಗಳೂ ಶಿಕ್ಷಣ ಪದ್ಧತಿಗೆ; ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button