Kannada NewsLatest

ಘಟಪ್ರಭಾ ನದಿಯಲ್ಲಿ ತೇಲಿ ಬಂತು ಅಪರಿಚಿತ ಶವ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಘಟಪ್ರಭಾ ಹಾಗೂ ಕೃಷ್ಣಾ ನದಿಯಲ್ಲಿ ಪ್ರವಾಹ ಭೀತಿ ಮುಂದುವರೆದಿದ್ದು, ಅಪರಿಚಿತ ವ್ಯಕ್ತಿಯೊಬ್ಬರ ಶವ ಘಟಪ್ರಭಾ ನದಿಯಲ್ಲಿ ತೇಲಿ ಬಂದಿರುವ ಘಟನೆ ಗೋಕಾಕ್ ನಲ್ಲಿ ನಡೆದಿದೆ.

ಗೋಕಾಕ್ ತಾಲೂಕಿನ ಮಳವಂಕಿ ಗ್ರಾಮದಲ್ಲಿ ಘಟಪ್ರಭಾ ನದಿಯಲ್ಲಿ ಶವವೊಂದು ತೇಲಿ ಬಂದಿದ್ದು, ಕೊಳೆತು ಗುರುತು ಸಿಗದ ರೀತಿಯಲ್ಲಿ ಪತ್ತೆಯಾಗಿದೆ.

Home add -Advt

Related Articles

Back to top button