Karnataka NewsLatest

*ಸಿಎಂ ಮನೆ ಮುಂದೆ ಬಾಂಬ್ ಬೆದರಿಕೆ ಹಾಕಿದ ವ್ಯಕ್ತಿ: ದಂಗಾದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ‘ಕಾವೇರಿ’ ನಿವಾಸದ ಎದುರು ವ್ಯಕ್ತಿಯೋರ್ವ ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಸಿಎಂ ಸಿದ್ದರಾಮಯ್ಯ ಅವರ ಭೇಟಿಗೆಂದು ಬಂದ ಗಡ್ಡದಾರಿ ವಯಸ್ಸಾದ ವ್ಯಕ್ತಿಯೊಬ್ಬ ಕೈಯಲ್ಲಿ ಎರಡು ಬ್ಯಾಗ್ ಹಿಡಿದು ಬಂದಿದ್ದು, ಸಿಎಂ ಸಿದ್ದರಾಮಯ್ಯ ಅವರ ಭೇಟಿಯಾಗಿ ಮನವಿ ಪತ್ರ ಸಲ್ಲಿಸಬೇಕೆಂದು ಹೇಳಿದ್ದಾನೆ. ಪೊಲೀಸ್ ಸಿಬ್ಬಂದಿಗಳು ಸಿಎಂ ಮನೆ ಒಳಗೆ ಬಿಟ್ಟಿಲ್ಲ. ವ್ಯಕ್ತಿಯನ್ನು ತಡೆದಿದ್ದಾರೆ. ಈ ವೇಳೆ ವ್ಯಕ್ತಿ ಬಾಂಬ್ ಬೆದರಿಕೆ ಹಾಕಿದ್ದಾನೆ.

Home add -Advt

ಬ್ಯಾಗ್ ನಲ್ಲಿ ಬಾಂಬ್ ಇದೆ. ಮುಟ್ಟಬೇಡಿ ಎಂದಿದ್ದಾನೆ. ಒಂದು ಕ್ಷಣ ಪೊಲೀಸರು ದಂಗಾಗಿ ಹೋಗಿದ್ದಾರೆ. ವ್ಯಕ್ತಿಯನ್ನು ಹಾಗೂ ಬ್ಯಾಗ್ ಗಳನ್ನು ಪರಿಶೀಲನೆ ನಡೆಸಿದ ಪೊಲೀಸರು ಯಾವುದೇ ಸ್ಫೋಟಕ ವಸ್ತು ಇಲ್ಲ ಎಂಬುದನ್ನು ಖಚಿತಪಡಿಸಿಕೊಂಡು ವ್ಯಕ್ತಿಯನ್ನು ಸ್ಥಳದಿಂದ ಕಳುಹಿಸಿದ್ದಾರೆ.


Related Articles

Back to top button