Kannada NewsKarnataka NewsLatest

*ಕರಡಿ ದಾಳಿಗೆ ರೈತ ಬಲಿ*

ಪ್ರಗತಿವಾಹಿನಿ ಸುದ್ದಿ; ಶಿರಸಿ: ಕರಡಿ ದಾಳಿಗೆ ರೈತರೊಬ್ಬರು ಬಲಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಮರಗಡಿಯಲ್ಲಿ ನಡೆದಿದೆ.

Home add -Advt

ಗದ್ದೆಯಲ್ಲಿ ಕೆಲಸಕ್ಕೆ ಹೋಗಿದ್ದ ರೈತನ ಮೇಲೆ ಕರಡಿ ದಾಳಿ ಮಾಡಿದ್ದು ಭೀಕರವಾಗಿ ಕೊಂದು ಹಾಕಿದೆ. ಮರಗಡಿ ಗೌಳಿ ದಡ್ಡಿಯ ಜಿಮ್ಮು ವಾಘು ತೋರವತ್(58) ಕರಡಿ ದಾಳಿಗೆ ಬಲಿಯಾದ ವ್ಯಕ್ತಿ.

ಗದ್ದೆಗೆ ಹೋಗಿ ವಾಪಸ್ ಆಗುತ್ತಿದ್ದಾಗ ಈ ಘಟನೆ ನಡೆದಿದೆ. ರೈತ ರಾತ್ರಿಯಾದರೂ ಮನೆಗೆ ವಾಪಸ್ ಬಂದಿರಲಿಲ್ಲ. ಹೀಗಾಗಿ, ಕುಟುಂಬಸ್ಥರು ಹುಡುಕಲು ಹೋಗಿದ್ದಾರೆ. ಈ ವೇಳೆ ಕರಡಿ ದಾಳಿಯಿಂದ ಮೃತಪಟ್ಟಿರುವುದು ಕಂಡು ಬಂದಿದೆ.

ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿರೋ ಕುಟುಂಬಸ್ಥರು ಗ್ರಾಮಸ್ಥರು. ಈ ಕುರಿತು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.


Related Articles

Back to top button