Belagavi NewsBelgaum NewsKannada NewsKarnataka News

*ಬೆಳಗಾವಿಯಲ್ಲಿ ಭೀಕರ ಸರಣಿ ಅಪಘಾತ: ಮೂವರು ಸಾವು*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ಬಣಜವಾಡ ಬಳಿಯ ವಿಜಯಪುರ-ಸಂಕೇಶ್ವರ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. ಲಾರಿ, ಪಿಕಪ್ ವಾಹನ, ಇನೋವಾ ಹಾಗೂ ಸ್ಕಾರ್ಪಿಯೋ ನಡುವೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ಮಹಾರಾಷ್ಟ್ರ ಮೂಲದ ಮಹೇಶ್ ಸುಭಾಷ್ ಗಾತಾಡೆ (30), ಶಿರೋಳದ ಶಿವಂ ಯುವರಾಜ್ (24) ಹಾಗೂ ಸಾಂಗ್ಲಿ ಮೂಲದ ಮೀರಜ್ ನ ಸಚಿನ್ ಮಾಳಿ ಎಂದು ಗುರುತಿಸಲಾಗಿದೆ.

ಗಾಯಾಳುಗಳನ್ನು ಅಥಣಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಥಣಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Home add -Advt


Related Articles

Back to top button