Belagavi NewsBelgaum NewsKarnataka NewsLatest

*ಬೆಳಗಾವಿಯಲ್ಲಿ ಕೃಷ್ಣಮೃಗಗಳ ಸಾವು ಪ್ರಕರಣ: ಇಂದು ಮರಣೋತ್ತರ ಪರೀಕ್ಷೆ ನಡೆಸಲಿರುವ ತಜ್ಞ ವೈದ್ಯರ ತಂಡ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ 28 ಕೃಷ್ಣ ಮೃಗಗಳ ನಿಗೂಢ ಸಾವು ಪ್ರಕರಣಕ್ಕೆ ಸಂಅಬ್ಂಧಿಸಿದಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ತನಿಖೆಗೆ ಆದೇಶಿಸಿದ್ದಾರೆ.

ಇಂದು ಮೂರು ಕೃಷ್ಣಮೃಗಗಳ ಮರಣೋತ್ತರ ಪರೀಕ್ಷೆಯನ್ನು ತಜ್ಞ ವೈದ್ಯರ ತಂಡ ನಡೆಸಲಿದೆ. ಬೆಂಗಳೂರಿನ ಬನ್ನೇರುಘಟ್ಟ ಪಶು ವೈದ್ಯರ ತಂಡ ಕಿತ್ತೂರು ಚನ್ನಮ್ಮ ಮೃಗಾಲಯಕ್ಕೆ ಆಗಮಿಸಿದ್ದು, ಕೃಷ್ಣ ಮೃಗಗಳ ಸಾವಿನ ಬಗ್ಗೆ ಪರಿಶೀಲನೆ ನಡೆಸಿದೆ. ಇಂದು ಮೂರು ಕೃಷ್ಣ ಮೃಗಗಳ ಮರಣೋತ್ತರ ಪರೀಕ್ಷೆ ನಡೆಸಲಿದ್ದಾರೆ.

Home add -Advt

ಬ್ಯಾಕ್ಟಿರಿಯಾ ಸೋಂಕಿನಿಂದ ಕೃಷ್ಣಮೃಗ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಆದರೆ ಮರಣೋತ್ತರ ಪರೀಕ್ಷೆ ಬಳಿಕವೇ ಜಿಂಕೆಗಳ ಸಾವಿನ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಲಿದೆ.

Related Articles

Back to top button