Election NewsKannada NewsKarnataka NewsNationalPolitics
ಸಿಎಂ ಭೇಟಿಯಾದ ಬೆಳಗಾವಿ ಕಾಂಗ್ರೆಸ್ ಮುಖಂಡರು

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ನಿವಾಸದಲ್ಲಿ ಅಭಿನಂದಿಸಿದರು.
ಈ ವೇಳೆ ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ಶಾಸಕರಾದ ಅಶೋಕ್ ಪಟ್ಟಣ, ಬಾಬಾಸಾಬ್ ಪಾಟೀಲ್, ವಿಶ್ವಾಸ ವೈದ್ಯ, ಆಸೀಫ್ ಸೇಠ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಲಕ್ಷ್ಮಣರಾವ್ ಚಿಂಗಳೆ, ವಿನಯ್ ನಾವಲಗಟ್ಟಿ, ಶಾಮ್ ಘಾಟಗೆ, ವೀರಕುಮಾರ ಪಾಟೀಲ್, ಮಹಾವೀರ ಮೋಹಿತೆ, ಗಜಾನನ ಮಂಗಸೂಳಿ ಮತ್ತಿತರರು ಹಾಜರಿದ್ದರು.



