Kannada NewsKarnataka NewsLatest

*ಮತ್ತೊಂದು ಭೀಕರ ಅಪಘಾತ; ಇಬ್ಬರು ಮಕ್ಕಳು ಸೇರಿ ನಾಲ್ವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಸಂಕ್ರಾಂತಿ ಹಬ್ಬದ ದಿನವೇ ರಾಜ್ಯದಲ್ಲಿ ಸರಣಿ ಅಪಘಾತ ಸಂಭವಿಸಿದೆ. ದಾವಣಗೆರೆ ಬಳಿಕ ಇದೀಗ ಭತ್ತ ಕಟಾವು ಮಾಡುವ ಯಂತ್ರದ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಜಿನಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಅಪಘಾತದಲ್ಲಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವ ಬಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ.

Home add -Advt

ಮೃತರನ್ನು ಪಾಳ್ಯ ಗ್ರಾಮದ ಸಂತೋಷ್ (32), ಪತ್ನಿ ಸೌಮ್ಯ (27), ಮಗಳು ನಿತ್ಯಸಾಕ್ಷಿ (4) ಮೃತರು . 9 ವರ್ಷದ ಬಾಲಕ ಅಭಿ ಗಂಭೀರವಾಗಿ ಗಾಯಗೊಂಡಿದ್ದ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸದದ ಮಾಹಿತಿ ಪ್ರಕಾರ ಬಾಲಕ ಕೂಡ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಕೊಳ್ಳೆಗಾಲ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button