Belagavi NewsBelgaum NewsKarnataka NewsLatest

*ಬೆಳಗಾವಿ ತೀವ್ರಸ್ವರೂಪ ಪಡೆದ ರೈತರ ಪ್ರತಿಭಟನೆ: ಬಾರುಕೋಲು ಚಳುವಳಿ ಮೂಲಕ ಸರ್ಕಾರಕ್ಕೆ ಚಾಟಿ ಬೀಸಿ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಬೆಳಗಾವಿಯ ಗುರ್ಲಾಪುರದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರಸ್ವರೂಪ ಪಡೆದುಕೊಂಡಿದೆ.

ಧರಣಿಯಲ್ಲಿ ಪಾಲ್ಗೊಂಡಿರುವ ನೂರಾರು ರೈತರು ಅರೆಬೆತ್ತಲೆ ಹೋರಾಟ ನಡೆಸುತ್ತಿದ್ದಾರೆ. ಮತ್ತೊಂದೆಡೆ ಬಾರುಕೋಲು ಚಳುವಳಿ ಮೂಲಕ ಸರ್ಕಾರಕ್ಕೆ ಚಾಟಿ ಬೀಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Home add -Advt

ಇಂದೇ ಕಬ್ಬಿಗೆ ದರ ನಿಗದಿ ಮಾಡಬೇಕು ಎಂದು ರೈತರು ಪಟ್ಟು ಹಿಡಿದಿದ್ದಾರೆ. ಇಲ್ಲವಾದಲ್ಲಿ ಪ್ರತಿಭಟನೆ ಇನ್ನಷ್ಟು ಉಗ್ರ ಸ್ವರೂಪ ಪಡೆದುಕೊಳ್ಳಲಿದೆ ಎಂದು ಕಿಡಿಕಾರಿದ್ದಾರೆ.

Related Articles

Back to top button