Belagavi NewsBelgaum NewsKannada NewsKarnataka News

*ಬೆಳಗಾವಿಯಲ್ಲಿ 18 ಸೇತುವೆಗಳು ಮುಳುಗಡೆ: ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ ಪ್ರವಾಹ ಭೀತಿ*

ಪ್ರಗತಿವಾಹಿನಿ ಸುದ್ದಿ: ಪಶ್ಚಿಮ ಘಟ್ಟ, ಮಹಾರಾಷ್ಟ್ರ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಪರಿಣಾಮ ಬೆಳಗಾವಿ ಜಿಲ್ಲೆಯಲ್ಲಿ ಸಪ್ತ ನದಿಗಳು ಅಪಾಯದ ಮಟ್ಟದಲ್ಲಿ ಅಬ್ಬರಿ ಉಕ್ಕಿ ಹರಿಯುತ್ತಿವೆ. ಜಿಲ್ಲೆಯಲ್ಲಿ ಪ್ರವಾಹ ಭೀತಿ ಎದುರಾಗಿದೆ.

ಕೃಷ್ಣಾ, ವೇದಗಂಗಾ, ದೂದ ಗಂಗಾ, ಘಟಪ್ರಭಾ, ಮಲಪ್ರಭಾ, ಹಿರಣ್ಯಕೇಶಿ ಸೇರಿದಂತೆ ಬಹುತೇಕ ನದುಗಳುಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಜಿಲ್ಲೆಯಲ್ಲಿ 18 ಸೇತುವೆಗಳು ಮುಳುಗಡೆಯಾಗಿವೆ. ಇಂದು ಒಂದೇ ದಿನ 8 ಸೇತುವೆಗಳು ಮುಳುಗಡೆಯಾಗಿದ್ದು, ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿವೆ. ಜನ ಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ.

ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ 12 ಸೇತುವೆಗಳು ಮುಳುಗಡೆಯಾಗಿದ್ದರೆ, ಮೂಡಲಗಿ ಭಾಗದಲ್ಲಿ ನಾಲ್ಕು ಸೇತಿವೆಗಳು ಮುಳುಗಡೆಯಾಗಿವೆ. ಖಾನಾಪುರ ಭಾಗದಲ್ಲಿ ಎರಡು ಸೇತುವೆಗಳು ಮುಳುಗಡೆಯಾಗಿವೆ. ಗ್ರಾಮಗಳು, ಹೊಲ, ಗದ್ದೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಜನರು ಕ್ಷಣ ಕ್ಷಣಕ್ಕೂ ಪ್ರವಾಹದ ಭೀತಿಯಲ್ಲಿ ಕಾಲಕಳೆಯುತ್ತಿದ್ದಾರೆ.

Home add -Advt

Related Articles

Back to top button