Belagavi NewsBelgaum News

*ಬೆಳಗಾವಿ ಗುಂಪು ಘರ್ಷಣೆ: 2 ಪ್ರತ್ಯೇಕ ಪ್ರಕರಣ ದಾಖಲಿಸಿದ ಪೊಲೀಸರು*

ನಗರದಲ್ಲಿ ಹೈ ಅಲರ್ಟ್

ಪ್ರಗತಿವಾಹಿನಿ ಸುದ್ದಿ: ಮಕ್ಕಳ ನಡುಇವೆ ಕ್ರಿಕೆಟ್ ಆಟದ ವಿಚಾರವಾಗಿ ಆರಂಭವಾದ ಗಲಾಟೆ ಎರಡು ಗುಂಪುಗಳ ಘರ್ಷಣೆಗೆ ಕಾರಣವಾಗಿದ್ದು, ಮನೆಗಳ ಮೇಲೆ ಕಲ್ಲು ತೂರಾಟ ನಡೆದು ಬೆಳಗಾವಿಯ ಅಳ್ವಾನ್ ಗಲ್ಲಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಈ ಹಿನ್ನೆಲೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ.

ಗುಂಪು ಘರ್ಷಣೆ ಹಾಗೂ ಕಲ್ಲು ತೂರಾಟ ಸಂಬಂಧ ಅನ್ಯಕೋಮಿನ ಯುವಕರು ಹಾಗೂ ಹಿಂದೂಗಳ ಮೇಲೆ ಶಹಾಪುರ ಪೊಲೀಸರು ಠಾಣೆಯಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲಿಸಿ ಎಫ್ ಐ ಆರ್ ದಾಖಲಿಸಿದ್ದಾರೆ.

ಅನ್ಯಕೋಮಿನ 14 ಜನರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 143, 147, 148, 323, 324, 307 ಹಾಗೂ ಐಪಿಸಿ ಸೆಕ್ಷನ್ 354, 504, 506, 153A, 149 ಅಡಿ 13 ಜನ ಹಿಂದೂಗಳ ವಿರುದ್ಧವೇ ಇದೇ ಸೆಕ್ಷನ್ ಅಡಿಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ.

ಇನ್ನು ಗುಂಪು ಘರ್ಷಣೆ ಪ್ರಕರಣದಲ್ಲಿ 10 ಜನರನ್ನು ಬಂಧಿಸಲಾಗಿದೆ. ಬೆಳಗಾವಿ ನಗರದಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಹೆಚ್ಚಿನ ಪೊಲೀಸರನ್ನು ಭದ್ರತೆ ನಿಯೋಜಿಸಲಾಗಿದೆ.

Related Articles

Back to top button