Belagavi NewsBelgaum NewsKannada NewsKarnataka NewsLatest

*BREAKING: ಬೆಳಗಾವಿಯಲ್ಲಿ ಹೈ ಅಲರ್ಟ್ ಘೋಷಣೆ*

ಗುಪ್ತಚರ ಇಲಾಖೆ ಸೂಚನೆ ಬೆನ್ನಲ್ಲೇ ಕಟ್ಟೆಚ್ಚರ

Home add -Advt


ಪ್ರಗತಿವಾಹಿನಿ ಸುದ್ದಿ: ಗುಪ್ತಚರ ಇಲಾಖೆ ಸೂಚನೆ ಮೇರೆಗೆ ಬೆಳಗಾವಿ ನಗರದಾದ್ಯಂತ ಹೈಅಲರ್ಟ್ ಘೋಷಿಸಿಸಲಾಗಿದೆ. ದೆಹಲಿಯ ಕೆಂಪುಕೋಟೆ ಬಳಿ ಉಗ್ರರು ಕಾರ್ ಬಾಂಬ್ ಸ್ಫೋಟ ನಡೆಸಿದ ಪ್ರಕರಣದ ಬೆನ್ನಲ್ಲೇ ಕೇಂದ್ರ ಗುಪ್ತಚರ ಇಲಾಖೆ ಬೆಳಗಾವಿ ಅಧಿವೇಶನದಲ್ಲಿಯೂ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಹಾಗೂ ವಿಧಾನಮಂಡಲ ಅಧಿವೇಶನ ನಡೆಯುವ ಸುವರ್ಣಸೌಧದ ಸುತ್ತ ಕಟ್ಟೆಚ್ಚರ ಘೋಷಿಸಲಾಗಿದೆ.

ನಾಳೆಯಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಗುಪ್ತಚರ ಇಲಾಖೆ ಕಟ್ಟೆಚ್ಚರಕ್ಕೆ ಸೂಚಿಸಿದೆ. ಈ ನಿಟ್ಟಿನಲ್ಲಿ ಬೆಳಗಾವಿ ನಗರದಲ್ಲೊ ಹೈಲರ್ಟ್ ಘೋಷಿಸಲಾಗಿದ್ದು, ಹೆಚ್ಚುವರಿಯಾಗಿ 6000 ಪೊಲೀಸರನ್ನು ನಿಯೋಜಿಸಲಾಗಿದೆ.

ಬೆಳಗಾವಿ ನಗರ ಪೊಲೀಸ್ ಆಯುಕ್ತ ಭೂಷಣ್ ಬೋರಸೆ ನೇತೃತ್ವದಲ್ಲಿ ಆರು ಎಸ್ ಪಿ ರ್ಯಾಂಕ್ ಮಟ್ಟದ ಪೊಲೀಸ್ ಅಧಿಕಾರಿಗಳು, 146 ಹಿರಿಯ ಪೊಲೀಸ್ ಅಧಿಕಾರಿಗಳು, 3820 ಪೊಲೀಸ್ ಸಿಬ್ಬಂದಿಗಳು, 500ಮ್ ಗಾರ್ಡ್ ಗಳು, 8 ಕ್ಷಿಪ್ರ ಕಾರ್ಯಪಡೆ, 10ಡಿಎ ಆರ್ ತುಕಡಿ, 35ಕೆ.ಎಸ್.ಆರ್.ಪಿ ತುಕಡಿ, 1 ಬಿಡಿಡಿಎಸ್ ತಂಡ, 1 ಗರುಡಾ ಪೊಲೀಸ್, 16 ವಿಧ್ವಂಸಕ ಕೃತ್ಯ ತಪಾಸಣೆ ತಂಡ ನಿಯೋಜಿಸಲಾಗಿದೆ.

ಅಧಿವೇಶನ ನಡೆಯುವ ಸುವರ್ಣಸೌಧದ ಸುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಎಲ್ಲೆಡೆ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದು ಹದ್ದಿನ ಕಣ್ಣಿಟ್ಟಿದ್ದಾರೆ.

Related Articles

Back to top button