Belagavi NewsBelgaum NewsKannada NewsKarnataka NewsLatest

*ಮೃಣಾಲ ಹೆಬ್ಬಾಳಕರ್ ಕಾರು ಚಾಲಕನಿಗೆ ಇರಿತ: ನಾಲ್ವರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪುತ್ರ ಮೃಣಾಲ್ ಹೆಬ್ಬಾಳಕರ್ ಕಾರು ಚಾಲಕನಿಗೆ ಚಾಕು ಇರಿದ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಶಿವಯ್ಯ ಪೂಜಾರಿ, ಮಿತೇಶ್ ಬಡಿಗೇರ್, ಮೋನಪ್ಪ ಪಾಟೀಲ, ಸಂಪತ್ ಕಡೋಲ್ಕರ್ ಬಂಧಿತ ಆರೋಪಿಗಳು. ಮೃಣಾಲ್ ಹೆಬ್ಬಾಳಕರ್ ಕಾರು ಚಾಲಕ ಬಸವಂತ್ ಎಂಬುವವರಿಗೆ ನಿನ್ನೆ ಬೆಳಗಾವಿಯ ಕ್ಲಬ್ ರಸ್ತೆಯಲ್ಲಿ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿದ್ದರು.

Home add -Advt

ಬಸವಂತ್ ಸ್ನೇಹಿತ ಮದನ್, ಕ್ಯಾಂಪ್ ಠಾಣೆಯಲ್ಲಿ ದೂರು ನೀಡಿದ್ದರು. ಇದೀಗ ನಾಲ್ವರನ್ನು ಬಂಧಿಸಲಾಗಿದೆ.

Related Articles

Back to top button