Belagavi NewsBelgaum NewsKarnataka News
*ಪತ್ನಿ ಕಾಟಕ್ಕೆ ಬೇಸತ್ತು ಪತಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಪತ್ನಿ ಕಾಟಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಅನಗೋಳ ದುರ್ಗಾ ಕಾಲೋನಿಯಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿ ವಿರುದ್ಧ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನದೇ ಕಂಪ್ಯೂಟರ್ ಶಾಪ್ ನಲ್ಲಿ ವೈಯರ್ ನಿಂದ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ.
ಸುನೀಲ್ ಮೂಲಿಮನಿ (33) ಮೃತ ದುರ್ದೈವಿ. ಸಾವಿಗೂ ಮುನ್ನ ತನ್ನ ಸಾವಿಗೆ ಪತ್ನಿ ಕಾರಣ ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ. ಉದ್ಯಮಬಾಗ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



