ವಿಟಿಯುದಲ್ಲಿ ಬಾಳೆಕುಂದ್ರಿ ಅಧ್ಯಯನ ಪೀಠ ಸ್ಥಾಪನೆಗೆ ಪ್ರಸ್ತಾವನೆ
ಜಲಸಂಪನ್ಮೂಲ ಇಲಾಖೆಗೆ ವಿಟಿಯು ಕುಲಪತಿ ಕರಿಸಿದ್ದಪ್ಪ ಪತ್ರ
Pragativahini Exclusive
10 ಕೋಟಿ ರೂ. ಮಂಜೂರಿಗೆ ಪ್ರಸ್ತಾವನೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಇಲ್ಲಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಎಸ್. ಜಿ, ಬಾಳೇಕುಂದ್ರಿ ಅಧ್ಯಯನ ಪೀಠ ಸ್ಥಾಪನೆ ಮಾಡಬೇಕು ಎನ್ನುವ ಪ್ರಸ್ತಾವನೆಯನ್ನು ವಿಶ್ವವಿದ್ಯಾಲಯದ ಕುಲಪತಿ ಕರಿಸಿದ್ದಪ್ಪ ಜಲಸಂಪನ್ಮೂಲ ಇಲಾಖೆಗೆ ಸಲ್ಲಿಸಿದ್ದಾರೆ.
ಈ ಕುರಿತು ಜಲಸಂಪನ್ಮೂಲ ಇಲಾಖೆ ಕಾರ್ಯದರ್ಶಿಗೆ ಅವರು ಪತ್ರ ಬರೆದಿದ್ದಾರೆ. ಪೀಠದ ಪರಿಣಾಮಕಾರಿ ಅನುಷ್ಠಾನಕ್ಕಾಗಿ 10 ಕೋಟಿ ರೂ.ಗಳನ್ನು ಮೀಸಲಿಡಬೇಕು ಎಂದೂ ಅವರು ಕೋರಿದ್ದಾರೆ.