GIT add 2024-1
Laxmi Tai add
Beereshwara 33

ಮಹಿಳಾ ಶಕ್ತಿಯಿಂದ ದೇಶದಲ್ಲಿ ದೊಡ್ಡ ಬದಲಾವಣೆ ಸಾಧ್ಯ – ಲಕ್ಷ್ಮಿ ಹೆಬ್ಬಾಳಕರ್

ಶ್ರೀ ಮಹಾಲಕ್ಷ್ಮಿ ಮಹಿಳಾ ಮಂಡಳ ಉದ್ಘಾಟನೆ

Anvekar 3
Cancer Hospital 2
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಮಹಿಳೆಯ ಶಕ್ತಿ ಅಪಾರವಾಗಿದ್ದು, ಅದು ಸಂಘಟನೆ ರೂಪದಲ್ಲಿ ಕ್ರೋಡೀಕರಣಗೊಂಡಾಗ ಅದು ನೂರ್ಮಡಿಗೊಳ್ಳುತ್ತದೆ. ಅದನ್ನು ಧನಾತ್ಮಕವಾಗಿ ಬಳಸಿಕೊಂಡರೆ ಈ ದೇಶದಲ್ಲಿ ದೊಡ್ಡ ಬದಲಾವಣೆ ತರಲು ಸಾಧ್ಯವಾಗುತ್ತದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ.
Emergency Service
 ಬೆಳಗಾವಿ ಗಣೇಶಪುರದ ಮಹಾಲಕ್ಷ್ಮಿ ನಗರದಲ್ಲಿ ಶ್ರೀ ಮಹಾಲಕ್ಷ್ಮಿ ಮಹಿಳಾ ಮಂಡಳವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂದಿರಾಗಾಂಧಿ ಅವರು ಒಬ್ಬ ಮಹಿಳೆಯಾಗಿ ಈ ದೇಶವನ್ನು ಆಳಿರುವುದನ್ನು, ದೇಶದಲ್ಲಿ ದೊಡ್ಡ ಕ್ರಾಂತಿ ಮಾಡಿರುವುದನ್ನು ನಾವ್ಯಾರೂ ಮರೆಯುವಂತಿಲ್ಲ.
ನಾವು ಮನಸ್ಸು ಮಾಡಿದರೆ ಯಾವುದೂ ಅಸಾಧ್ಯವಲ್ಲ. ಹಾಗಾಗಿ ಈ ಸಂಘಟನೆಯ ಮೂಲಕ ಗ್ರಾಮದಲ್ಲಿ ಉತ್ತಮ ವ್ಯವಸ್ಥೆ ನಿರ್ಮಾಣಕ್ಕೆ ಮುಂದಾಗೋಣ. ನಿಮ್ಮ ಬೆಂಬಲಕ್ಕೆ ನಾನು ನಿಲ್ಲುತ್ತೇನೆ. ಜೊತೆಗೆ ಸರಕಾರದಿಂದ ಸಂಘಟನೆಗೆ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಲು ಪ್ರಯತ್ನಿಸುತ್ತೇನೆ ಎಂದು ಲಕ್ಷ್ಮಿ ಹೆಬ್ಬಾಳಕರ್ ಭರವಸೆ ನೀಡಿದರು.
​ ಮಹಿಳಾ ಮಂಡಳದ ಅಧ್ಯಕ್ಷೆ ಅನಿತಾ ಬಿರಾದಾರ,​ ಪದಾಧಿಕಾರಿಗಳಾದ​ ಶೀಲಾ ಪಾಟೀಲ,​ ಶ್ರೀಮತಿ​ ಹುಕ್ಕೇರಿ, ಮಹಿಳಾ ಮಂಡಳದ ಎಲ್ಲ ಸದಸ್ಯರು ಉಪಸ್ಥಿತರಿದ್ದರು.
Bottom Add3
Bottom Ad 2