Belagavi NewsBelgaum NewsKannada NewsKarnataka News

*ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಳಗಾವಿಯ ಕ್ಯಾಂಪ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಎ ಎಸ್ ಪಿ ಮೇಲೆ ಹೊಡೆಯಲು ಕೈ ಎತ್ತಿದ ಘಟನೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್ ಟಿ ಐ ಕಾರ್ಯಕರ್ತ ಭೀಮಪ್ಪ ಗಡಾದ ಕ್ಯಾಂಪ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Home add -Advt

ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ ಬಿಜೆಪಿ ಕಾರ್ಯಕರ್ತರು ವೇದಿಕೆಯತ್ತ ನುಗ್ಗಲು ಯತ್ನಿಸಿ ಪ್ರತಿಭಟನೆ ನಡೆಸುತ್ತಿರುವುದನ್ನು ಕಂಡು ಕೋಪಗೊಂಡ ಸಿಎಂ ಸಿದ್ದರಾಮಯ್ಯ, ಭದ್ರತೆಗೆ ನಿಯೋಜಿಸಿದ್ದ ಧಾರವಾಡದ ಎ ಎಸ್ ಪಿ ನಾರಾಯಣ ಭರಮನಿ ಅವರಿಗೆ ವೇದಿಕೆ ಮೇಲೆ ಹೊಡೆಯಲೆಂಬಂತೆ ಕೈ ಎತ್ತಿದ್ದ ಘಟನೆ ನಡೆದಿತ್ತು.

ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಮೇಲೆ ಕೈ ಮಾಡಲು ಮುಂದಾಗಿದ್ದ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರಿ ಆರ್ ಟಿ ಐ ಕಾರ್ಯಕರ್ತ ಭೀಮಪ್ಪ ಗಡಾದ ದೂರು ದಾಖಲಿಸಿದ್ದಾರೆ. ಇದೇ ವೇಳೆ ರಾಷ್ಟ್ರೀಯ ಮಾನವ ಹಕ್ಕು ಆಯೋಗಕ್ಕೂ ದೂರು ಸಲ್ಲಿಸಿದ್ದಾರೆ.


Related Articles

Back to top button