Kannada NewsLatest

ಬೆಳಗಾವಿಯಲ್ಲಿ ಪುಂಡಾಟಿಕೆ; ಸಿಎಂ ಬೊಮ್ಮಾಯಿ ವಾರ್ನಿಂಗ್

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಸೂಚಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಷ್ಟ್ರಭಕ್ತರ ಪ್ರತಿಮೆಗಳನ್ನು ಧ್ವಂಸಗೊಳಿಸುವುದು ಸರಿಯಲ್ಲ. ಕೆಲವೇ ಕಲ ಪುಂಡರು ಈ ರೀತಿ ಮಾಡುತ್ತಿದ್ದಾರೆ. ಅಂತವರನ್ನು ಸದೆಬಡಿಯುವುದಾಗಿ ತಿಳಿಸಿದರು.

ಎಂಇಎಸ್ ಪುಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು, ಮತ್ತೆ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲಾಗುವುದು ಎಂದರು.
ಮಾಜಿ ಮೇಯರ್ ಶಿವಾಜಿ ಸುಂಠರಕರ್, ಶಿವಸೇನೆಯ ಪ್ರಕಾಶ ಶಿರೋಳ್ಕರ್, ಶ್ರೀರಾಮ ಸೇನೆಯ ರಮಾಕಾಂತ್ ಕೊಂಡುಸ್ಕರ್ ಆರೆಸ್ಟ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button