Kannada NewsKarnataka News
ಬೆಳಗಾವಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತಾಲೂಕಿನ ಮಾರಿಹಾಳದಲ್ಲಿ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈಯ್ಯಲಾಗಿದೆ.
ಮಹಾಂತೇಶ ರುದ್ರಪ್ಪ ಕರಲಿಂಗನವರ (23) ಕೊಲೆಯಾದ ಯುವಕ. ಗುರುವಾರ ತಡರಾತ್ರಿ ನಾಲ್ಕೈದು ಯುವಕರ ಗುಂಪು ಹಲ್ಲೆ ನಡೆಸಿ ಮಾರಕಾಸ್ತ್ರಗಳಿಂಚ ಕೊಚ್ಚಿ ಕೊಲೆಗೈದಿದೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಅಪರಾಧ ವಿಭಾಗದ ಡಿಸಿಪಿ ವಿ.ವಿ. ಸ್ನೇಹ ಹಾಗೂ ಮಾರಿಹಾಳ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ತನಿಖೆ ಕೈಗೊಂಡಿದ್ದಾರೆ.




