*ನವಿಲುಗಳ ಹತ್ಯೆ ಪ್ರಕರಣ; ಓರ್ವ ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಕಬ್ಬಿನ ಗದ್ದೆಯೊಂದರಲ್ಲಿ 8 ನವಿಲುಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಇನ್ನಿಬ್ಬರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಕಬ್ಬಿನ ಗದ್ದೆಯಲ್ಲಿ 8 ನವಿಲುಗಳು ಸಾವನ್ನಪ್ಪಿದ್ದವು. ಈ ಬಗ್ಗೆ ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕಾಗಮಿಸಿ ನವಿಲುಗಳ ಮೃತದೇಹ ವಶಕ್ಕೆ ಪಡೆದು, ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ನವಿಲುಗಳ ಹತ್ಯೆ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಝಳಕಿ ಗ್ರಾಮದ ನಿವಾಸಿ … Continue reading *ನವಿಲುಗಳ ಹತ್ಯೆ ಪ್ರಕರಣ; ಓರ್ವ ಆರೋಪಿ ಅರೆಸ್ಟ್*