Kannada NewsKarnataka NewsLatestUncategorized

BREAKING: ಬೆಳಗಾವಿಯಲ್ಲಿ ಭೀಕರ ಸರಣಿ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ; ಕಾಡಸಿದ್ದೇಶ್ವರಶ್ರೀ ಸೇರಿ ಇಬ್ಬರಿಗೆ ಗಾಯ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಲಾರಿ ಹಾಗು ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿಯ ಕಾಕತಿ ಬಳಿ ನಡೆದಿದೆ.

ಮುಂದೆ ತೆರಳುತ್ತಿದ್ದ ಲಾರಿ ಒಮ್ಮೆಲೇ ಬ್ರೇಕ್ ಹಾಕಿದ್ದರಿಂದ ಹಿಂದೆ ಬರುತ್ತಿದ್ದ ಆಲ್ಟೋ ಕಾರ್ ಡಿಕ್ಕಿ ಹೊಡೆದಿದೆ. ಆಲ್ಟೋ ಕಾರಿಗೆ ಹಿಂದಿನಿಂದ ಬಂದ ಮತ್ತೊಂದು ಲಾರಿ ಗುದ್ದಿದ್ದು, ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಆಲ್ಟೋ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಶಿವಪುರದ ಮುಪ್ಪಿನ ಕಾಡಸಿದ್ದೇಶ್ವರಶ್ರೀ ಸೇರಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಕಾಕತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Home add -Advt


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button