Kannada NewsLatest

ಶಿಕ್ಷಕರ ಸಮಸ್ಯೆ ಬಗೆಹರಿಸುವಂತೆ ಸಚಿವರಿಗೆ ಮನವಿ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಾಜಕಟ್ಟಿ ಗ್ರಾಮದಲ್ಲಿ ಶಾಲಾ ಕೊಠಡಿಯ ಉದ್ಘಾಟನೆಗೆ ಆಗಮಿಸಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ಅವರನ್ನು ಕರ್ನಾಟಕ ರಾಜ್ಯ ಶಾಲಾ / ಕಾಲೇಜು ನೌಕರರ ಒಕ್ಕೂಟದ ಅಧ್ಯಕ್ಷ ಎಸ್ .ಎಸ್.ಮೂಕನವರ ಭೇಟಿ ಮಾಡಿ ರಾಜ್ಯದ ಅನುದಾನಿತ/ಅನುದಾನ ರಹಿತ ಶಾಲಾ – ಕಾಲೇಜು ಶಿಕ್ಷಕರ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಿದರು.

ರಾಜ್ಯದ ಶಿಕ್ಷಕರ ಸಮಸ್ಯೆಗಳಾದ
*ಅನುದಾನ ರಹಿತ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವದು.
*ಅನುದಾನಕ್ಕೆ ಒಳಪಡಿಸಿದ ಶಾಲೆಗಳಲ್ಲಿ ಶೀಘ್ರ ಶಿಕ್ಷಕರ ನೇಮಕ
*ಅನುದಾನಕ್ಕೆ ಒಳಪಡಿಸಿದ ಶಾಲೆಗಳಲ್ಲಿ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆ
*ಕೋವಿಡ್-19 ಸಂದರ್ಭದಲ್ಲಿ ಅನುದಾನ ರಹಿತ ಕೆಲವು ಶಾಲಾ/ಕಾಲೇಜು ಶಿಕ್ಷಕರಿಗೆ ಕೋವಿಡ್ ಪ್ಯಾಕೇಜ್ ಹಣ ಬಿಡುಗಡೆ ಮಾಡುವಂತೆ ಕೋರಿಕೆ.
ಹುಕ್ಕೇರಿ ತಾಲೂಕಿನ ಗುಟಗುದ್ದಿ ಗ್ರಾಮದ RMS ಶಾಲೆಯ ಕಟ್ಟದ ಕೊರತೆ, ಪೂರ್ಣಕಾಲಿಕ ಶಿಕ್ಷಕರ ಸಮಸ್ಯೆ ಕುರಿತು ಸಚಿವರಿಗೆ ಮನವರಿಕೆ ಮಾಡಲಾಯಿತು.

Home add -Advt

ಮನವಿಗೆ ಸ್ಪಂದಿಸಿದ ಶಿಕ್ಷಣ ಸಚಿವರು ಬೇಡಿಕೆ ಈಡೇರಿಸುವ ಭರವಸೆ ನೀಡಿದರು. ಈ ಸಮಯದಲ್ಲಿ ಬಿ.ಆರ್.ಬಂಜಿರಾಂ, ಹೊಳೆಪ್ಪ ಹುಲಿಕಟ್ಟಿ, ಯಲ್ಲೇಶ್ ಕೊಚ್ಚರಗಿ ಹಾಜರಿದ್ದರು.
ಎಲ್ಲ ಜಿಲ್ಲೆಗಳಲ್ಲೂ ವಿವಿ ಸ್ಥಾಪನೆ; ಯುವಿಸಿಇ, ವಿಟಿಯು ಐಐಟಿ ಮಟ್ಟಕ್ಕೆ: ಅಶ್ವತ್ಥನಾರಾಯಣ

Related Articles

Back to top button