Belagavi NewsBelgaum NewsKannada NewsKarnataka NewsLatest
*ಗೋಡೆ ಕುಸಿತದಿಂದ ವ್ಯಕ್ತಿ ಸಾವು: ಸ್ಥಳಕ್ಕೆ ಧಾವಿಸಿ ಸಾಂತ್ವನ ಹೇಳಿದ ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ*
![](https://pragativahini.com/wp-content/uploads/2024/01/hatiholi-1.jpg)
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಡಾಲ ಅಂಕಲಗಿ ಗ್ರಾಮದಲ್ಲಿ ಆಕಸ್ಮಿಕ ಗೋಡೆ ಕುಸಿತದಿಂದಾಗಿ ವ್ಯಕ್ತಿಯೋರ್ವರು ಮೃತರಾದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸ್ಥಳಕ್ಕೆ ಧಾವಿಸಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
![](https://pragativahini.com/wp-content/uploads/2024/01/badala-1024x768.jpg)
ಬಡಾಲ ಅಂಕಲಗಿಯ ಚನ್ನಪ್ಪ ಕುರಬರ ಗೋಡೆ ಕುಸಿತದಿಂದಾಗಿ ಸ್ಥಳದಲ್ಲೇ ಮರಣಹೊಂದಿದ್ದಾರೆ. ಸುದ್ದಿ ತಿಳಿದ ತಕ್ಷಣ ಚನ್ನರಾಜ ಹಟ್ಟಿಹೊಳಿ ಅವರು ತಹಶಿಲ್ದಾರ ಬಸವರಾಜ ನಾಗರಾಳ, ಹಿರೇಬಾಗೇವಾಡಿ ಸಿಪಿಐ ಮತ್ತಿತರ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ತೆರಳಿದರು.
![](https://pragativahini.com/wp-content/uploads/2024/01/badala-ankalagi-768x1024.jpg)
ಘಟನೆಯ ಸಂಪೂರ್ಣ ಮಾಹಿತಿ ಪಡೆದ ಅವರು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಸರಕಾರದಿಂದ ಕುಟುಂಬಕ್ಕೆ ಸೂಕ್ತ ಪರಿಹಾರ ಕೊಡಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.