Latest

ಮಾಜಿ ಮೇಯರ್ ಗೆ ಜೈಲೇ ಗತಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಾಸಕರ ಮನೆಗೆ ಬೆಂಕಿ ಹಾಗೂ ಡಿಜೆ ಹಳ್ಳಿ, ಕೆಜಿ ಹಳ್ಳಿಯಲ್ಲಿ ಗಲಭೆ ಪ್ರಕರಣದ ಆರೋಪಿ  ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ನ.24ರವರೆಗೆ ನಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.

ಸಂಪತ್ ರಾಜ್ ಅವರನ್ನು ಎರಡು ದಿನಗಳ ಕಾಲ ವಿಚಾರಣೆಗೆ ಅನುಮತಿ ನೀಡುವಂತೆ ಎನ್ ಐಎ ಅಧಿಕಾರಿಗಳು 67ನೇ ಸಿಸಿ ಹೆಚ್ ಕೋರ್ಟ್ ಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ನ.24ರವರೆಗೆ ಮಾಜಿ ಮೇಯರ್ ಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ. ಇದೀಗ ಸಂಪತ್ ರಾಜ್ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ.

ನ.23 ಹಾಗೂ 24ರಂದು ಎನ್ ಐಎ ಅಧಿಕಾರಿಗಳು ಸಂಪತ್ ರಾಜ್ ಅವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲೇ ವಿಚಾರಣೆ ನಡೆಸಲಿದ್ದಾರೆ.

Home add -Advt

Related Articles

Back to top button