*ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: ಅನಾರೋಗ್ಯಕ್ಕೀಡಾದ ತಂದೆಯನ್ನು ಆಸ್ಪತ್ರೆಯಲ್ಲಿ ಬಿಟ್ಟು ಪರಾರಿಯಾದ ಮಗ; ಯಾರೂ ದಿಕ್ಕಿಲ್ಲದೇ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಹಿರಿಜೀವ*

ಪ್ರಗತಿವಾಹಿನಿ ಸುದ್ದಿ: ಅನಾರೋಗ್ಯದಿಂದ ಬಳಲುತ್ತಿದ್ದ ತಂದೆಯನ್ನು ಮಗ ಮಹಾಶಯನೊಬ್ಬ ಆಸ್ಪತ್ರೆಯಲ್ಲಿ ಬಿಟ್ಟು ಪರಾರಿಯಾಗಿದ್ದು, ನೊಂದ ಜೀವ ಚಿಕಿತ್ಸೆ ಫಲಕಾರಿಯಾಗದೇ ಅನಾಥವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸತೀಶ್ವರ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ದುರ್ದೈವಿ. ಅನಾರೋಗ್ಯಕ್ಕೀಡಾಗಿದ್ದ ಸತೀಶ್ವರ್ ಅವರನ್ನು ಅವರ ಮಗ ಕೆಲ ದಿನಗಳ ಹಿಂದೆ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದ. ಹತ್ತು ದಿನಗಳ ಹಿಂದೆ ತಂದೆಯನ್ನು ಆಸ್ಪತ್ರೆಯಲ್ಲಿಯೇ ಬಿಟ್ಟು ಏಕಾಏಕಿ ಪರಾರಿಯಾಗಿದ್ದಾನೆ. ಮಗ ಬರುತ್ತಾನೆ ಎಂಬ ಭರವಸೆಯಲ್ಲಿಯೇ ಜೀವ ಕೈಯಲ್ಲಿ ಹಿಡಿದು ಚಿಕಿತ್ಸೆ ಪಡೆಯುತ್ತಿದ್ದ ಸತೀಶ್ವರ್ ನಿನ್ನೆ ಚಿಕಿತ್ಸೆ … Continue reading *ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: ಅನಾರೋಗ್ಯಕ್ಕೀಡಾದ ತಂದೆಯನ್ನು ಆಸ್ಪತ್ರೆಯಲ್ಲಿ ಬಿಟ್ಟು ಪರಾರಿಯಾದ ಮಗ; ಯಾರೂ ದಿಕ್ಕಿಲ್ಲದೇ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಹಿರಿಜೀವ*