Belagavi NewsBelgaum NewsKannada NewsKarnataka NewsLatest

*ಸರ್ಕಾರಿ ಬಸ್ ಹಾಗೂ ಗೂಡ್ಸ್ ಲಾರಿ ಭೀಕರ ಅಪಘಾತ; ನಾಲ್ವರಿಗೆ ಗಂಭೀರ ಗಾಯ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸರ್ಕಾರಿ ಬಸ್ ಹಾಅಗೂ ಗೂಡ್ಸ್ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಗಾಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸವದಿ ದುರ್ಗಾ ಹತ್ತಿರ ಜಮಖಂಡಿ- ಅಥಣಿ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಸತ್ತಿ ಮಾರ್ಗದಲ್ಲಿ ನಡೆದಿದೆ.

ಅಪಘಾತದಲ್ಲಿ ಬಸ್ ನಲ್ಲಿದ್ದ ನಾಲ್ಕು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ. ಜಮಖಂಡಿ ಯಿಂದ ಅಥಣಿ ಪಟ್ಟಣಕ್ಕೆ ಬರುತ್ತಿದ್ದ ಜಮಖಂಡಿ ಘಟಕಕ್ಕೆ ಸೇರಿದ ಬಸ್‌ ಹಾಗೂ ಲಾರಿ ಮಧ್ಯೆ ಅಪಘಾತ ಜರುಗಿದೆ.

ಗಾಯಾಳುಗಳನ್ನು ಅಥಣಿ ಸಮುದಾಯದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button