Kannada NewsLatest
ಕಾರು ಚಾಲಕನ ಅಡ್ಡಗಟ್ಟಿ ಬರ್ಬರ ಹತ್ಯೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕಾರು ಚಾಲಕರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿಯ ಅಂಬೇಡ್ಕರ್ ಗಲ್ಲಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಜಯಪಾಲ್ ಗರಾನೆ (35) ಎಂದು ಗುರುತಿಸಲಾಗಿದೆ. ಸಂಬಂಧಿಕರ ಮನೆಯ ಮದುವೆಗೆ ತೆರಳಿ ವಾಪಸ್ ಆಗುತ್ತಿದ್ದ ವೇಳೆ ತಡರಾತ್ರಿ ಜಯಪಾಲ್ ನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿದ್ದಾರೆ.
ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ.



