Belagavi NewsBelgaum NewsPolitics

*ಬೆಳಗಾವಿಗೆ ಆಗಮಿಸಿದ್ದ ಎಂಪಿ ನೀರಜ್ ಡಾಂಗೆ ಆಸ್ಪತ್ರೆಗೆ ದಾಖಲು: ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಮಹಾಧಿವೇಶನದ ಶತಮಾನೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ರಾಜಸ್ಥಾನ ರಾಜಸಭೆ ಸದಸ್ಯ ನೀರಜ್ ಡಾಂಗೆ ಅನಾರೋಗ್ಯದಿಂದ ಬೆಳಗಾವಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅನಾರೋಗ್ಯದಿಂದ ಬೆಳಗಾವಿ ಆಸ್ಪತ್ರೆಗೆ ದಾಖಲಾಗಿರುವ ರಾಜಸ್ಥಾನದ ರಾಜ್ಯಸಭೆ ಸದಸ್ಯ ನೀರಜ್ ಡಾಂಗೆ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ವಿಚಾರಿಸಿ ಬೇಗ ಗುಣಮುಖರಾಗುವಂತೆ ಹಾರೈಸಿದರು.

Home add -Advt

ಸಚಿವರಾದ ಕೆ.ಜೆ.ಜಾರ್ಜ್, ಸತೀಶ್ ಜಾರಕಿಹೊಳಿ, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ತೆಂಗಿನ ನಾರು ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ನಟರಾಜ್ ಜಾನಕಿರಾಮ್ ಅವರು ಮುಖ್ಯಮಂತ್ರಿಗಳ ಜೊತೆಗಿದ್ದರು.

Related Articles

Back to top button