Belagavi NewsBelgaum NewsKannada NewsKarnataka NewsLatest

*ಬೆಳಗಾವಿ: ಗುತ್ತಿಗೆದಾರನಿಂದ ಆತ್ಮಹತ್ಯೆಗೆ ಯತ್ನ*

ಪ್ರಗತಿವಾಹಿನಿ ಸುದ್ದಿ; ಗೋಕಾಕ್: ಶಾಲಾ ಕಟ್ಟದ ಕಾಮಗಾರಿ ಮುಗಿದರೂ ಬಾಕಿ ಬಿಲ್ ಪಾವತಿಸಿಲ್ಲ ಎಂದು ಮನನೊಂದ ಗುತ್ತಿಗೆದಾರರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ನಡೆದಿದೆ.

ಗುತ್ತಿಗೆದಾರ ರಾಮಣ್ಣ ಅಡಿವೆಪ್ಪ ಆತ್ಮಹತ್ಯೆಗೆ ಯತ್ನಿಸಿದವರು. ಗೋಕಾಕ್ ನ ಬೆಣಚಿನಮರಡಿಯಲ್ಲಿ ಈ ಘಟನೆ ನಡೆದಿದೆ. ಶಾಲಾ ಕಟ್ಟಡದ ಕಾಮಗಾರಿ ಮುಗಿದರೂ ಬಾಕಿ ಬಿಲ್ ಪಾವತಿಸಿಲ್ಲ ಎಂದು ಆರೋಪಿಸಿ ಗುತ್ತಿಗೆದಾರರ ರಾಮಣ್ಣ ಅದೇ ಶಾಲೆಯ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

2018ರಲ್ಲಿ ಪ್ರೌಢಶಾಲಾ ಕಟ್ಟಡ ಕಾಮಗಾರಿ ಕೈಗೊಂಡಿದ್ದ ರಾಮಣ್ಣ ಎನ್ ಸಿಸಿ ಕಂಪನಿ ಬಿಲ್ ಬಾಕಿ ಉಳಿಸಿಕೊಂಡಿದೆ. ಕಟ್ಟಡ ಕಾಮಗಾರಿ ಮುಗಿದರೂ ಬಾಕಿ ಬಿಲ್ ಪಾವತಿ ಮಾಡಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button