Belagavi NewsBelgaum NewsKannada NewsKarnataka NewsLatest

*ಬೆಳಗಾವಿ: ಧ್ವಜಸ್ತಂಭ ನೆಡುತ್ತಿದ್ದಾಗ ದುರ್ಘಟನೆ; ಯುವಕ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ; ಕುಂದಾನಗರಿ ಬೆಳಗಾವಿಯಲ್ಲಿ ರಾಜ್ಯೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾಗಲೇ ದುರಂತವೊಂದು ಸಂಭವಿಸಿದೆ. ಧ್ವಜಸ್ತಂಭ ನೆಡುವಾಗ ವಿದ್ಯುತ್ ಪ್ರವಹಿಸಿ ಯುವಕ ಸಾವನ್ನಪ್ಪಿದ್ದಾನೆ.

ಬೈಲಹೊಂಗಲ ತಾಲೂಕಿನ ವಕ್ಕುಂದ ಗ್ರಾಮದ ಬಸ್ ನಿಲ್ದಾಣದ ಎದುರು ಧ್ವಜಸ್ತಂಭ ನೆಡುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ರಾಜ್ಯೋತ್ಸವಕ್ಕೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ತಯಾರಿ ನಡೆಸಲಾಗುತ್ತಿತ್ತು. ಧ್ವಜಸ್ತಂಭ ನೆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿದ್ದು, ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಪ್ರಜ್ವಲ್ ಚನ್ನೇಗೌಡ (18) ಮೃತ ಯುವಕ. ಘಟನಾ ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button