Kannada NewsKarnataka NewsLatest

ಕಬ್ಬಿನ ಗದ್ದೆಗೆ ನುಗ್ಗಿದ ಬಸ್ 10 ಜನರಿಗೆ ಗಾಯ

ಪ್ರಗತಿ ವಾಹಿನಿ ಸುದ್ದಿ, ಮುರಗೋಡ: ತಲ್ಲೂರಿನಿಂದ ಸವದತ್ತಿಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಮುರಗೋಡ ಬಳಿ ಕಬ್ಬಿನ ಗದ್ದೆಗೆ ನುಗ್ಗಿದ ಪರಿಣಾಮ 10 ಪ್ರಯಾಣಿಕರು ಗಾಯಗೊಂಡಿದ್ದಾರೆ.

ವೇಗವಾಗಿ ಬಂದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಬ್ಬಿನ ಗದ್ದೆಗೆ ನುಗ್ಗಿದೆ. ಇದೇ ವೇಳೆ ರಸ್ತೆ ಪಕ್ಕ ನಿಲ್ಲಿಸಿದ್ದ ಬೈಕ್ ಒಂದಕ್ಕೆ ಬಸ್ ಡಿಕ್ಕಿಯಾಗಿದ್ದು, ಬೈಕ್ ನುಜ್ಜುಗುಜ್ಜಾಗಿದೆ. ಈ ಕುರಿತು ಮುರಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Home add -Advt

ದಲಿತರ ಆತಿಥ್ಯ ಸ್ವೀಕರಿಸಿದ ಮುಖ್ಯಮಂತ್ರಿ ಬೊಮ್ಮಾಯಿ

Related Articles

Back to top button