Belagavi NewsBelgaum News

*ಬೆಳಗಾವಿಯಲ್ಲಿ ಫೈನಾನ್ಸ್ ಕಿರುಕುಳಕ್ಕೆ ಮತ್ತೋರ್ವ ಬಲಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾರೆ. ವ್ಯಕ್ತಿಯೋರ್ವ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯ ರಾಯಬಾಗ ಪಟ್ಟಣದಲ್ಲಿ ನಡೆದಿದೆ.

ಬಸವರಾಜ್ ಆತ್ಮಹತ್ಯೆಗೆ ಶರಣಾದವರು. ಬಸವರಾಜ್ 4 ಫೈನಾನ್ಸ್ ಗಳಲ್ಲಿ 2.50 ಲಕ್ಷ ಸಾಲ ಪಡೆದಿದ್ದರು. ವಾರದ ಕಂತು ಕಟ್ಟುವಂತೆ ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡುತ್ತಿದ್ದರು. ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತು ಫೆ.11ರಂದು ವಿಷ ಸೇವಿಸಿದ್ದರು.

Home add -Advt

ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಆರು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಬಸವರಾಜ್, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button