Kannada NewsLatest

ಹಳ್ಳ ದಾಟುತ್ತಿದ್ದಾಗ ನೀರಿನ ಸೆಳೆತಕ್ಕೆ ಕೊಚ್ಚಿ ಹೋದ ಬಾಲಕಿ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಜಿಲ್ಲೆಯಾದ್ಯಂತ ಕಳೆದ ನಾಲ್ಕು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಸೇತುವೆಗಳು ಮುಳುಗಡೆಯಾಗಿದ್ದು, ನದಿ, ಕೆರೆ, ಹಳ್ಳ-ಕೊಳ್ಳಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಈ ಮಧ್ಯೆ ಹಳ್ಳ ದಾಟುತ್ತಿದ್ದಾಗ ಬಾಲಕಿಯೊಬ್ಬಳು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಚಿಕ್ಕೋಡಿ ತಾಲೂಕಿನ ರಾಮನಗರ ಕಾಲೋನಿಯಲ್ಲಿ ನಡೆದಿದೆ.

ಬಸ್ ನಿಲ್ದಾಣದಿಂದ ತಾಯೊಯೊಂದಿಗೆ ಮನೆಗೆ ವಾಪಸ್ ಆಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಹಳ್ಳ ದಾಟುತ್ತಿದ್ದ ವೇಳೆ ಬಾಲಕಿ ಜಾರಿಬಿದ್ದು ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದಾಳೆ.

ನೀರು ಪಾಲಾಗಿರುವ ಬಾಲಕಿಗಾಗಿ ಎಸ್ ಡಿ ಆರ್ ಎಫ್ ತಂಡದಿಂದ ಶೋಧಕಾರ್ಯ ನಡೆದಿದೆ.
ಕೃಷ್ಣಾ ನದಿ ಪಾತ್ರದಲ್ಲಿ ತೀವ್ರ ಪ್ರವಾಹ ಎಚ್ಚರಿಕೆ

Home add -Advt

Related Articles

Back to top button