Kannada NewsLatest

ಲೋಕವಾರ್ತೆ ದಿನಪತ್ರಿಕೆ ಸಂಪಾದಕರ ಮೇಲೆ ಮಾರಣಾಂತಿಕ ಹಲ್ಲೆ

ಪ್ರಗತಿವಾಹಿನಿ ಸುದ್ದಿ; ಗೋಕಾಕ್: ಬೆಳಗಾವಿಯ ಲೋಕವಾರ್ತೆ ದಿನಪತ್ರಿಕೆ ಸಂಪಾದಕ ಹೀರೋಜಿ ಮಾವರಕರ ಅವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಗೋಕಾಕ ನಗರದಲ್ಲಿ ನಡೆದಿದೆ.

ಈ ಬಗ್ಗೆ ಹೀರೋಜಿ ಅವರ ಸಹೋದರ ಲೋಕ ಕ್ರಾಂತಿ ದಿನಪತ್ರಿಕೆ ಸಂಪಾದಕ ಶ್ರೀನಿವಾಸ್ ಮಾವರಕರ್ ಮಾಹಿತಿ ನೀಡಿದ್ದು, ಹಲ್ಲೆ ನಡೆಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Home add -Advt

ಗೋಕಾಕದ ಅವರ ಮನೆಯ ಪಕ್ಕದ ನಿವೇಶನದ ಸಂಬಂಧ ಜಗಳ ಆರಂಭವಾಗಿ ಹೀರೋಜಿ ಅವರ ಮೇಲೆ ಹಲ್ಲೆ ನಡೆದಿದೆ ಎಂದು ಶ್ರೀನಿವಾಸ್ ಹೇಳಿದ್ದಾರೆ . ಗಂಭೀರವಾಗಿ ಗಾಯಗೊಂಡಿರುವ ಅವರನ್ನು ರಾತ್ರಿ ಬೀಟ್ ನಲ್ಲಿದ್ದ ಪೋಲಿಸರು ಗೋಕಾಕದ ಉಮ್ರಾಣಿ ಆಸ್ಪತ್ರೆಗೆ ಸೇರಿಸಿ ಪ್ರಾಣ ಉಳಿಸಿದ್ದಾರೆ ಎಂದು ತಿಳಿಸಿದ್ದಾರೆ .

ಹಲ್ಲೆಗೊಳಗಾದವರಿಗೆ ಸೂಕ್ತ ರಕ್ಷಣೆ ಕೊಡಬೇಕು. ಸಂಪಾದಕರ ಕುಟುಂಬದವರಿಗೆ ರಕ್ಷಣೆ ನೀಡಿ ಮುಂದೆ ಹೆಚ್ಚಿನ ಅನಾಹುತ ಆಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದಿನಪತ್ರಿಕೆಗಳ ಸಂಪಾದಕರ ಸಂಘ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ವಿನಂತಿಸಿದೆ.

ಬೆಳಗಾವಿ: ದೈಹಿಕ ಶಿಕ್ಷಕನಿಂದಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

Related Articles

Back to top button