Kannada NewsLatest

ಬೆಳಗಾವಿ ಗಡಿಯಲ್ಲಿ ಮತ್ತೆ ಪ್ರವಾಹ ಭೀತಿ; ಹಲವು ಸೇತುವೆಗಳು ಮುಳುಗಡೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಬೆಳಗಾವಿ ಜಿಲ್ಲೆ ಚಿಕ್ಕೋಡಿ ಉಪವಿಭಾಗದಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ.

ಭಾರಿ ಮಳೆಯಿಂದಾಗಿ ವೇದಗಂಗಾ, ದೂಧ್ ಗಂಗಾ ನದಿಗಳು ತುಂಬಿ ಹರಿಯುತ್ತಿದ್ದು, ಬಾರವಾಡ-ಕುಣ್ಣೂರು ನಡುವಿನ ಸೇತುವೆ ನೀರಿನಲ್ಲಿ ಮುಳುಗಡೆಯಾಗಿದ್ದು, ನಿಪ್ಪಾಣಿ ತಾಲೂಕಿನ ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿವೆ.

ಇನ್ನೊಂದೆಡೆ ದೂಧ್ ಗಂಗಾ ನದಿಯಲ್ಲಿ ನೀರಿನ ಹರಿವು ಹೆಚ್ಚಿದ್ದು ಭೋಜ-ಕಾರದಗಾ ಸಂಪರ್ಕಿಸುವ ಸೇತುವೆ ಹಾಗೂ ಕಲ್ಲೋಳ-ಯಡೂರು ನಡುವಿನ ಸೇತುವೆ ಕೂಡ ಜಲಾವೃತಗೊಂಡಿದೆ. ಪರಿಣಾಮ 8ಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಡಿತಗೊಂಡಿವೆ.
ಬೆಳಗಾವಿಯಲ್ಲಿ ಗೂಡಂಗಡಿ ಮಾಲಿಕನ ಬರ್ಬರ ಹತ್ಯೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button