Belagavi NewsBelgaum NewsKannada NewsLatest

*ಹಿಂಡಲಗಾ ಜೈಲಿನಲ್ಲಿ ಕೈದಿಗಳ ನಡುವೆ ಮಾರಾಮಾರಿ; ಕೊಲೆ ಯತ್ನ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಇಬ್ಬರು ಕೈದಿಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಹಿಂಡಲಗಾ ಜೈಲಿನಲ್ಲಿ ನಡೆದಿದೆ.

ಗಲಾಟೆ ವೇಳೆ ಒಬ್ಬ ಕೈದಿ ಮತ್ತೋರ್ವ ಕೈದಿಗೆ ಸ್ಕ್ರೂಡ್ರೈವರ್ ನಿಂದ 5 ಬಾರಿ ಇರಿದು ಕೊಲೆಗೆ ಯತ್ನಿಸಿದ್ದಾನೆ ನಿನ್ನೆ ಸಂಜೆ ಹಿಂಡಲಗಾ ಜೈಲಿನಲ್ಲಿ ಈ ಘಟನೆ ನಡೆದಿದೆ.

ಮಂಡ್ಯ ಮೂಲದ ವಿಚಾರಣಾಧೀನ ಕೈದಿ ಸಾಯಿಕುಮಾರ್ ಗೆ , ಜೈಲು ಶಿಕ್ಷೆಗೆ ಒಳಗಾಗಿರುವ ಕೈದಿ ಶಂಕರ ಭಜಂತ್ರಿ ಎಂಬುವವನು ಹಲ್ಲೆ ನಡೆಸಿದ್ದು, ಇರಿದು ಕೊಲೆ ಮಾಡಲು ಯತ್ನಿಸಿದ್ದಾನೆ. ಸಾಯಿಕುಮಾರ್ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಜಿಲ್ಲಾಸ್ಪತ್ರೆ ಐಸಿಯುನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button